ಜಿಲ್ಲೆದೇಶಬೆಳಗಾವಿಬೆಳಗಾವಿ ನಗರರಾಜಕೀಯರಾಜ್ಯ

ಲಕ್ಷ್ಮೀ ಪುತ್ರನಿಗೆ ಎಐಸಿಸಿ ಹೊಸ ಜವಾಬ್ದಾರಿ!ಗೋವಾ ಮಾಧ್ಯಮ ಸಂಯೋಜಕರಾಗಿ ಮೃಣಾಲ್ ಆಯ್ಕೆ!

ಬೆಳಗಾವಿ:

ನವದೆಹಲಿ: ಮುಂಬರುವ ಗೋವಾ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನಾಲ್ವರು ಸಂಯೋಜಕರನ್ನು ನೇಮಕ ಮಾಡಿದ್ದು, ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ.
AICC ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರು ಸೆ.14ರಂದು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಗೋವಾ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಧ್ಯಮ ಸಂಬಂಧಿತ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. ನೇಮಕಗೊಂಡಿರುವ ಎಲ್ಲಾ ಸಂಯೋಜಕರು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯೊಂದಿಗೆ ನಿಕಟ ಸಮನ್ವಯ ಸಾಧಿಸಿ ಮಾಧ್ಯಮ ಹಾಗೂ ಪ್ರಚಾರಕ್ಕೆ ಸಂಬಂಧಿಸಿದ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೇಮಕಗೊಂಡಿರುವವರು:
ಮ್ಯಾಥ್ಯೂ ಆಂಟನಿ – ರಾಷ್ಟ್ರೀಯ ಮಾಧ್ಯಮ ಸಂಯೋಜಕ
ಮೃಣಾಲ್ ಹೆಬ್ಬಾಳಕರ್ – ಸಂಯೋಜಕ
ನಿಶಾಂತ್ ಆನಂದ್ – ಸಂಯೋಜಕ
ಅಲಿ ಮೆಹದಿ – ಸಂಯೋಜಕ
ಬೆಳಗಾವಿಯಿಂದ ರಾಷ್ಟ್ರಮಟ್ಟದ ಪಕ್ಷದ ಜವಾಬ್ದಾರಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮೃಣಾಲ್ ಹೆಬ್ಬಾಳಕರ್ ಅವರಿಗೆ ಗೋವಾ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ AICC ಜವಾಬ್ದಾರಿ ನೀಡಿರುವುದು ಗಮನಾರ್ಹವಾಗಿದೆ.
ಈ ನೇಮಕಾತಿಯ ಮೂಲಕ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ಚಟುವಟಿಕೆಗಳಲ್ಲಿ ಮೃಣಾಲ್ ಹೆಬ್ಬಾಳಕರ್ ಅವರ ಪಾತ್ರ ಮತ್ತಷ್ಟು ವಿಸ್ತರಿಸಿದಂತಾಗಿದೆ.

TV24 News Desk
the authorTV24 News Desk

Leave a Reply

error: Content is protected !!