ಧಾರವಾಡ: ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಬೆಳಗಳಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ನಡೆದ ಭೀಕರ ಅಪಘಾತವೊಂದು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಸವಾರ 29-ವರ್ಷ-ವಯಸ್ಸಿನ ಮಹ್ಮದ್ ನವಾಜ್ ತಮ್ಮ ಎಡದಿಂದ ಬಲಕ್ಕೆ ರಸ್ತೆಯನ್ನು ಕ್ರಾಸ್ ಮಾಡುವಾಗ ಅವರ ಹಿಂದಿನಿಂದ ಬರುತ್ತಿದ್ದ ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಮಹಮ್ಮದ್ ನವಾಜ್ ಹುಬ್ಬಳ್ಳಿಯ ತಬೀಬ್ಲ್ಯಾಂಡ್ ನಿವಾಸಿಯಾಗಿದ್ದು, ಕೆಲಸದ ನಿಮಿತ್ತ ಧಾರವಾಡ ಕಡೆಗೆ ಬಂದಿದ್ದರು.
ಲಾರಿ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ನವಾಜ್ ಪ್ರಾಣ ಕಳೆದುಕೊಳ್ಳುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಡಿಕ್ಕಿಯಾಗೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ