ಬೈಲಹೊಂಗಲ: ಖಾಸಗಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ 17 ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವಸತಿ ನಿಲಯದಲ್ಲಿ ಮದ್ಯಾಹ್ನ ೧.೩೦ ಗಂಟೆ ಸುಮಾರಿಗೆ ಇತರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ವಿದ್ಯಾರ್ಥಿ ಶವವನ್ನು ತಾಲೂಕಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
೧ ಪಿಯುಸಿಯಲ್ಲಿ ಫೇಲಾಗಿದ್ದ ಪರುಶರಾಮನಿಗೆ ಆರ್ಟ್ಸ್ ವಿಷಯದಲ್ಲಿ ಒಲವು ಇತ್ತು ಆದ್ರೆ ಮನೆಯವರು ವಾಣಿಜ್ಯ, ವಿಜ್ಞಾನದಲ್ಲಿ ಓದಬೇಕು ಎಂಬ ಒತ್ತಡ ಹೇರುತ್ತಿದ್ದರು ಮಾನಸಿಕ ಒತ್ತಡದಿಂದ ಅವನು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಬೈಲಹೊಂಗಲ ಸಿ ಪಿ ಐ, ಯು ಎಚ್ ಸಾತೆನಹಳ್ಳಿ ತಿಳಿಸಿದ್ದಾರೆ.