ಗದಗ: ಕಳೆದ ಹಲವಾರು ವರ್ಷಗಳಿಂದ ಮಕ್ಕಳಿಲ್ಲದ ಕಾರಣಕ್ಕೆ ದೇವರಿಗೆ ಹರಕೆ ಹೊತ್ತು ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನರಗುಂದ ತಾಲೂಕಿನಲ್ಲಿ ನಡೆದಿದೆ.
ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಸಹದೇವಪ್ಪ ಮತ್ತು ದೀಪಾ ದೇವರಮನೆ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರು ಮತ್ತು ಬೈಕ್ ರಭಸಕ್ಕೆ ವಾಹನಗಳ ಮದ್ಯೆ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಭಸ್ಮಗೊಂಡಿವೆ.
ಮಕ್ಕಳಿಗಾಗಿ ಹರಕೆ ಹೊರಲು ಸಹದೇವಪ್ಪ ಮತ್ತು ದೀಪಾ ಬೈಕ್ ನಲ್ಲಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಬುಧವಾರ ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.