ಮೂಡಲಗಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಸಂಬಂಧ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋಕಾಕ ಪೊಲೀಸರು ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವಂತ ಬಾಳೇಶ್ ಕಟ್ಟಿಕಾರ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ಬಾಳೇಶ್ ಕಟ್ಟಿಕಾರ ಅವರು ಆಗಸ್ಟ್ 7, 2022ರಂದು ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮಕ್ಕಾಗಿ ಎಲೆಕ್ಟ್ರಾನಿಕ್ ಡಿವೈಸರ್ ಸಪ್ಲೈ ಮಾಡಿದ್ದ ಎಂಬುದಾಗಿ ತಿಳಿದು ಬಂದಿದೆ.