ದಾವಣಗೆರೆ :ಕಳೆದ ಕೆಲ ದಿನಗಳ ಹಿಂದೆ ಅಷ್ಟೇ ನಾಪತ್ತೆಯಾಗಿ ಹೊನ್ನಾಳಿ ಶಾಸಕ ಎಂ. ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್, ನವೆಂಬರ 4 ರಂದು ನಾಲೆಯಲ್ಲಿ ಕಾರ್ ಸಮೇತ ಶವವಾಗಿ ಪತ್ತೆಯಾಗಿದ್ದರು. ಅದೇ ರೀತಿಯಲ್ಲೇ ಬೆಳಗಾವಿಯ ಬಸವನ ಕುಡಚಿ ಪೊಲೀಸ್ ಠಾಣೆಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಬಸವನ ಕುಡಚಿ ಪೊಲೀಸ್ ಠಾಣೆಯ ಎಎಸ್ ಐ ಪುತ್ರ ಪ್ರಕಾಶ್ ಚಂಬಪ್ಪ ಸಾವನ್ನಪ್ಪಿದ್ದಾರೆ.ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ ಒಂದು ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ