ವಿಜಯಪುರ

ಪತ್ನಿಯೊಂದಿಗೆ ನೇಣಿಗೆ ಶರಣಾದ ಯುವಪತ್ರಕರ್ತ

ವಿಜಯಪುರ : ಯುವ ಪತ್ರಕರ್ತ ಹಾಗೂ ಆತನ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.
ತಿಪ್ಪಣ್ಣ ಖಾಸಗಿ ಮಾಧ್ಯಮವೊಂದರಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ.‌ ಮುದ್ದೇಬಿಹಾಳ ತಾಲೂಕಿನ ಕೊಣ್ಣೂರು ಗ್ರಾಮದ ತಿಪ್ಪಣ್ಣ ಕೆಲವೇ ದಿನಗಳ  ಹಿಂದಷ್ಟೇ ಮುದ್ದೇಬಿಹಾಳ ತಾಲೂಕಿನ ಕೆಸಾಪೂರ ಗ್ರಾಮದ ಪ್ರೀತಿಸಿದ ಯುವತಿಯೊಂದಿಗೆ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಗಂಡ,ಹೆಂಡತಿ ಇಬ್ಬರೂ ಪಟ್ಟಣದಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದರು.ತಿಪ್ಪಣ್ಣ ಹೊಸಮನಿ (34) ಮತ್ತು ಆತನ ಪತ್ನಿ ಸುಶೀಲಾಬಾಯಿ (30) ಎಂದು ಗುರುತಿಸಲಾಗಿದೆ. ತಿಪ್ಪಣ್ಣ ಖಾಸಗಿ ಮಾಧ್ಯಮವೊಂದರಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ನವೆಂಬರ 5 ರಂದು ತಿಪ್ಪಣ್ಣ ಮತ್ತು ಸುಶೀಲಾಬಾಯಿ ಪ್ರೀತಿಸಿ ಮನೆಯವರ ಒಪ್ಪಿಗೆಯ ಮೇರೆಗೆ ಮದುವೆಯಾಗಿದ್ದರು ಎನ್ನಲಾಗಿದೆ.
ಪತಿ‌ – ಪತ್ನಿ ಇಬ್ಬರೂ ಅನೋನ್ಯವಾಗಿಯೇ ಸಂಸಾರ ನಡೆಸುತ್ತಿದ್ದರು. ಏಕಾಏಕಿ ಅಕ್ಕಪಕ್ಕದ ಕೋಣೆಗಳಲ್ಲಿ ನೇಣಿಗೆ ಶರಣಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಆರೀಫ ಮುಶಾಪುರಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
TV24 News Desk
the authorTV24 News Desk

Leave a Reply