ಕಿತ್ತೂರು: ಕಿತ್ತೂರಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಕಾರ್ಯಕ್ರತರ ಸಭೆ ಮಂಗಳವಾರ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಅವರು ಸಣ್ಣದುರ್ಗಪ್ಪ ಯಲ್ಲಪ್ಪ ದೊಡ್ಡಮನಿ ಅವರನ್ನು ಕರ್ನಾಟಕ ಪ್ರದೇಶ ಜಾತ್ಯಾತೀತ ದಳದ ಪರಿಶಿಷ್ಟ ಜಾತಿಯ ಕಿತ್ತೂರು ತಾಲ್ಲೂಕು ಅಧ್ಯಕ್ಷರನ್ನಾಗಿ ಮಾಡಿ ಆದೇಶ ಹೊರಡಿಸಿದ್ದಾರೆ. ಅವರಿಗೆ ಪಕ್ಷದ ಶಿಸ್ತು, ಸಿದ್ದಾಂತಗಳ ಅಡಿಯಲ್ಲಿ ಜವಾಬ್ದಾರಿಯಿಂದ ದಲಿತ ಸಮುದಾಯವನ್ನು ಒಗ್ಗೂಡಿಸಿ ಪಕ್ಷ ಬಲವರ್ಧನೆಯ ಕಾರ್ಯ ಮಾಡಬೇಕೆಂದು ತಿಳಿಸಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ಕಿತ್ತೂರು ತಾಲ್ಲೂಕು ಅಧ್ಯಕ್ಷರಾಗಿ ದೊಡ್ಡಮನಿ ಆಯ್ಕೆ