ಬೆಳಗಾವಿಬೆಳಗಾವಿ ನಗರ

ಅನಾವರಣಕ್ಕೆ ಸಜ್ಜಾದ  ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ್ ಗ್ರಾಮಕ್ಕೆ ಇಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭೇಟಿ ನೀಡಿ, ಗ್ರಾಮಸ್ಥರ ಜೊತೆ ಸೇರಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಬೃಹದಾಕಾರದ ಮೂರ್ತಿಯ ಬಿಡಿ ಭಾಗಗಳ ಜೋಡಣೆ ಹಾಗೂ ಕಿಲ್ಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ಕೆಲವೇ ದಿನಗಳಲ್ಲಿ ಈ ಮೂರ್ತಿಯು ಅನಾವರಣಗೊಳಲಿದ್ದು, ಶೀಘ್ರದಲ್ಲೇ ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲ ಮುಖಂಡರೊಂದಿಗೆ ಚರ್ಚಿಸಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತ್ರತ್ವದಲ್ಲಿ ಸಭೆಯನ್ನು ಕರೆದು ಮೂರ್ತಿಯ ಅನಾವರಣದ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಈ ವೇಳೆ ವಿಧಾನ ಪರಿಷತ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.
TV24 News Desk
the authorTV24 News Desk

Leave a Reply