ಬೆಳಗಾವಿ : ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ವಿಆರ್ಎಲ್ ಬಸ್ ಕಾತ್ರಜ್ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿ ಅಪಘಾತಕ್ಕೊಳಗಾದ ಘಟನೆ ರವಿವಾರ ರಾತ್ರಿ ಸಮಯದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಕೆಲವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಬ್ರೇಕ್ ಫೇಲ್ ಆಗುತ್ತಿದ್ದಂತೆ ಬಸ್ ಚಾಲಕ ಬಸ್ ಅನ್ನು ನಿಯಂತ್ರಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾನೆ. ಇನ್ನೊಂದು ಬದಿಯಲ್ಲಿ ಕಣಿವೆ ಇದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ ವರದಿಯಾಗಿದೆ.
tv24plus.in > Blog > ಜಿಲ್ಲೆ > ಬೆಳಗಾವಿ > ಬ್ರೇಕ್ ಫೇಲ್ ಆಗಿ ಬಸ್ ಅಪಘಾತ ; ತಪ್ಪಿದ ಭಾರಿ ಅನಾಹುತ.!