ಬೆಳಗಾವಿಬೆಳಗಾವಿ ನಗರ

ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ನಾಳೆ ಬೆಳಗಾವಿಗೆ

 
ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮತ್ತು ಕನ್ನಡಿಗರು ಸೌಹಾರ್ದತೆಯಿಂದ ಬದುಕುತ್ತಿದ್ದು,ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ,ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬೆಳಗಾವಿಗೆ ಆಗಮಸುತ್ತಿರುವ,ಬೆಳಗಾವಿಯ ಶಾಂತಿಯನ್ನು ಕದಡುವದಕ್ಕಾಗಿಯೇ ಬೆಳಗಾವಿಗೆ ಆಗಮಿಸುತ್ತಿರುವ ಮಹಾರಾಷ್ಟ್ರ ಇಬ್ಬರು ಸಚಿವರನ್ನು ಬಂಧಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ಮಂಗಳವಾರ ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಹಾಗೂ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತೃತ್ವದಲ್ಲಿ ಸಾವಿರಾರು ಕರವೇ ಕಾರ್ಯಕ್ರತರು ಹೋಟೆಲ್ ಇಫಾದಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ವರೆಗೆ ಬೃಹತ್ ರ್ಯಾಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸಂಚಾಲಕ ಮಹಾದೇವ ತಳವಾರ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.
TV24 News Desk
the authorTV24 News Desk

Leave a Reply