ಬೆಳಗಾವಿಬೆಳಗಾವಿ ನಗರ

ಅಂಬೇಡ್ಕರ್ ಮಹಾ ಪರಿ ನಿರ್ವಾನ ದಿನದ ನಿಮಿತ್ಯ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಣೆ

ಬೆಳಗಾವಿ:  ಬೆಳಗಾವಿ ಜಿಲ್ಲಾಡಳಿತ ,ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ದಲಿತ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಮಹಾಪರಿನಿರ್ವಾನ ದಿನದ ಅಂಗವಾಗಿ ಅವರು ಅಂಬೇಡ್ಕರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಡಾ.ಬಿ.ಆರ್ .ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸುವ ಮೂಲಕ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ ಅವರು ಅಂಬೇಡ್ಕರ್ ಸ್ಮರಣೆಗಾಗಿ ಸ್ಮಾರಕ ,ಅಧ್ಯಯನ ಕೇಂದ್ರ , ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರ ಅನುದಾನ ನೀಡಿದ್ದು ಕಾರ್ಯ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವದು ಎಂದರು.ಮಹಾನಗರ ಪಾಲಿಕೆ ಆಯುಕ್ತ ರುದ್ದೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಉಮಾ ಸಾಲಿಗೌಡರ ಸಂವಿಧಾನ ಶಿಲ್ಪಿಗೆ ಗೌರವ ಸಮರ್ಪಿಸಿದರು.ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಮಲ್ಲೇಶ ಕುರಂಗಿ, ಶಿವಪುತ್ರಪ್ಪ ಮೇತ್ರಿ , ಎಮ್ .ಆರ್ .ಕಲಪತ್ರಿ, ಸುಧೀರ ಚೌಗಲೆ, ಬಾಬು ಪೂಜಾರಿ, ಛಲವಾದಿ ಸಂಘಟನೆಯ ಜಿಲ್ಲಾಧ್ಯಕ್ಷ ಮೇತ್ರಿ ಸೇರಿದಂತೆ ದಲಿತ ಮುಖಂಡರು ಉಪಸ್ಥಿತರಿದ್ದರು. ನಂತರ ಶ್ರೀರಾಮಸೇನೆ ಹಿಂದುಸ್ತಾನದ ಅಧ್ಯಕ್ಷ ರಮಾಕಾಂತ ಕುಂಡುಸಕರ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದರು.
TV24 News Desk
the authorTV24 News Desk

Leave a Reply