ನಿಪ್ಪಾಣಿ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಗಳ ಮೇಲೆ ಪುಂಡರ ದಾಳಿ ಆರಂಭವಾಗಿದೆ. ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳನ್ನು ತಢದು ಮಸಿ ಬಳಿಯಲಾಗುತ್ತಿದೆ.ಭಾರಾಮತಿ ಬಸ್ ನಿಲ್ದಾಣದಲ್ಲಿ ಹಳಿಯಾಳ ಡಿಪೋಗೆ ಸೇರಿದ ಬಸ್ ಗೆ ಕಪ್ಪು ಮಸಿ ಬಳಿಯಲಾಗಿದೆ. ಮಂಗಳವಾರ ಸಂಜೆ ಏಳು ಗಂಟೆ ಸುಮಾರಿಗೆ ಬಂದ ೧೦ ರಿಂದ ೧೨ ಜನರ ಗುಂಪು ಈ ಕೃತ್ಯವೆಸಗಿದ್ದಾಗಿ ಬಸ್ ನಿರ್ವಾಹಕ ತಿಳಿಸಿದ್ದಾರೆ.
ಮಹಾರಾಷ್ಟ್ರ ನವನಿರ್ಮಾಣ ಸೇನೆ ಕರ್ನಾಟಕದ ಬಸ್ ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟಿಕೆ ಮೆರೆದಿದ್ದಾರೆ ತಕ್ಷಣವೇ ಪೋಲಿಸರು ರಕ್ಷಣೆ ಕೊಟ್ಟು ಬಸ್ ಗಳನ್ನು ಮರಳಿ ಕಳುಹಿಸಿದ್ದಾರೆ ಎಂದು ಚಾಲಕರು ತಿಳಿಸಿದರು.ಈ ಎಲ್ಲ ಬೆಳವಣಿಗಳ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ