ಧಾರವಾಡ : ಮಹಿಳಾ ಮುಖ್ಯಮಂತ್ರಿ ಬರಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಅದಕ್ಕೆ ತಕ್ಕ ವಾತಾವರಣ ನಿರ್ಮಾಣವಾಗಬೇಕಿದೆ. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಕೊಡಬಾರದು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಅವರು ಪ್ರಶ್ನಿಸಿದರು.
ಹುಬ್ಬಳ್ಳಿಯಲ್ಲಿ ನಾ ನಾಯಕಿ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿಷಯವನ್ನು ಎತ್ತಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಮಾತ್ರ ದಲಿತ ಸಿಎಂ ಸಾಧ್ಯ. ಬಿಜೆಪಿ ದಲಿತರನ್ನು ಒಡೆದು ಆಳುವ ನೀತಿ ಅನುರಸಿರುತ್ತಿದೆ. ಅಂಬೇಡ್ಕರ್ ಬಗ್ಗೆ ಮಾತನಾಡುವುದಕ್ಕೆ ಅವರ ಯೋಗ್ಯತೆ ಇಲ್ಲ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು