ವಿಜಯಪುರ

ಮಕ್ಕಳೊಂದಿಗೆ ತಾಯಿ ಕಾಲುವೆಗೆ ಹಾರಿ ಆತ್ಮಹತ್ಯೆ 

ವಿಜಯಪುರ: ಇಬ್ಬರು ಹೆಣ್ಣಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಮುಳವಾಡ  ಏತ ನೀರವಾರಿ ಕಾಲುವೆಗೆ ಇಬ್ಬರು ಹೆಣ್ಣಮಕ್ಕಳ ಜೊತೆಗೆ ತಾಯಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೇಣುಕಾ ಅಮೀನಪ್ಪ ಕೋನಿನ್(26) ಹಾಗೂ ಮಕ್ಕಳಾದಂತ ಯಲ್ಲವ್ವ(2) ಅಮೃತಾ(1) ಎಂದು ಗುರುತಿಸಲಾಗಿದೆ.
ಕಾಲುವೆಯಲ್ಲಿ ರೇಣುಕಾ ಅಮೀನಪ್ಪ ಕೋನಿನ್  ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ. ಮತ್ತೋರ್ವ ಮಗುವಿನ ಶವಕ್ಕಾಗಿ ಸ್ಥಳೀಯರು, ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
TV24 News Desk
the authorTV24 News Desk

Leave a Reply