ನವದೆಹಲಿ: ಮಹಾರಾಷ್ಟ್ರದ ರಾಜಕೀಯ ನಾಯಕರ ಭೇಟಿ, ಹೇಳಿಕೆಯಿಂದ ಬೆಳಗಾವಿ ಗಡಿಯಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ರಾಜ್ಯಗಳು ಚರ್ಚಿಸಿ ಸಮಸ್ಯೆ ಬಗೆಹರಿಸುವ ಸ್ಥಿತಿ ಸದ್ಯಕ್ಕಿಲ್ಲ. ಪರಿಸ್ತಿತಿ ಕೈಮೀರುತ್ತಿರುವುದಕ್ಕಿಂತ ಮೊದಲೇ ಸಮಸ್ಯೆ ಬಗೆಹರಿಸಲು ಇದೀಗ ಪ್ರಯತ್ನ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಗಡಿ ವಿಚಾರದಲ್ಲಿ ಕರ್ನಾಟಕದ ವಾದ ಮಂಡಿಸಿದ್ದಾರೆ. ಇಷ್ಟೇ ಅಲ್ಲ ಪರಿಹಾರ ಸೂತ್ರವನ್ನು ತಿಳಿಸಿದ್ದಾರೆ.
ಬೆಳಗಾವಿ ಗಡಿ ಸಮಸ್ಯೆ ಉಲ್ಬಣಿಸುತ್ತಿರುವ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಬುಲಾವ್ ನೀಡಿದ್ದರು. ಗಡಿ ಸಮಸ್ಯೆ ಬಗೆಹರಿಸಿ ಶಾಶ್ವತ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದರು. ಇದರಂತೆ ಸಿಎಂ ಬೊಮ್ಮಾಯಿ ಗಡಿ ವಿವಾದದ ಇತಿಹಾಸ, ಗಡಿ ಸಮಸ್ಯೆ ಕುರಿತ ವರದಿ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಅಮಿತ್ ಶಾ ಮುಂದಿಟ್ಟಿದ್ದಾರೆ.