ಬೆಳಗಾವಿಬೆಳಗಾವಿ ನಗರ

ಮರಾಠಿ ಪುಂಡರಿಂದ ಸರಕಾರಿ ವಾಹನಕ್ಕೆ ಕಲ್ಲು ತೂರಾಟ 

ಬೆಳಗಾವಿ:  ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಸೇರಿದ ವಾಹನಕ್ಕೆ ಕಲ್ಲು ಹೊಡೆದು ಜಖಂಗೊಳಿಸಿದ ಘಟನೆ ಬುಧವಾರ ರಾತ್ರಿ  ನಡೆದಿದೆ. ಬೆಂಗಳೂರಿನಿಂದ ಬೆಳಗಾವಿಗೆ ಚಳಿಗಾಲ ಅಧಿವೇಶನಕ್ಕಾಗಿ ವಾಹನವೊಂದು ಬಂದಿದೆ.  ಇದರ ಮೇಲೆ ಕಲ್ಲು ತೂರಲಾಗಿದೆ.ಸುವರ್ಣಸೌಧದ ಎದುರೇ ಈ ಕೃತ್ಯ ನಡೆದಿದೆ.
ಕರ್ನಾಟಕ ಸರ್ಕಾರ ಎಂದು ಈ ಜೀಪ್‌ನಲ್ಲಿ ಬರೆದುಕೊಂಡಿದ್ದರಿಂದ ವಾಹನವನ್ನು ಅಡ್ಡಗಟ್ಟಿದ ಮರಾಠಿ ಭಾಷಿಕರು ಕಲ್ಲು ತೂರಿ ವಿಕೃತಿ ಮೆರೆದಿದ್ದಾರೆ. ಅಲ್ಲದೆ, ಚಾಲಕ ಚೇತನ್‌ ಎಂಬುವವರ ಮೇಲೂ ಹಲ್ಲೆಗೆ ಯತ್ನ ಮಾಡಿದ್ದಾರೆ. ಜತೆಗೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ.
ಈ ವೇಳೆ ತಮ್ಮ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆಂದು ಗೊತ್ತಾದ ತಕ್ಷಣವೇ ಚಾಲಕ ಚೇತನ್‌ ಜೀಪು ಚಲಾಯಿಸಿಕೊಂಡು ಹೋಗಿದ್ದು, ಪುಂಡರಿಂದ ತಪ್ಪಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
TV24 News Desk
the authorTV24 News Desk

Leave a Reply