ಬೆಳಗಾವಿ

ಗಡಿ ವಿಚಾರದಲ್ಲಿ ಸರ್ಕಾರ ಸಾರ್ವಜನಿಕರಲ್ಲಿ ಕ್ಷಮೆ ಕೇಳಬೇಕು : ಹೆಚ್. ಕೆ ಪಾಟೀಲ್ 

ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸರ್ಕಾರಕ್ಕೆ ಗಂಭೀರತೆ, ಕಾಳಜಿ ಕಾಣಿಸುತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗಡಿ ವಿಚಾರದಲ್ಲಿ ಸರ್ಕಾರ ಸಾರ್ವಜನಿಕರಲ್ಲಿ ಕ್ಷಮೆ ಕೇಳಬೇಕು. ಸರ್ವಾನುಮತದಿಂದ ಒಮ್ಮತದ ನಿರ್ಣಯಕ್ಕೆ ಬಂದು ಗಡಿ ವಿವಾದಕ್ಕೆ ಇತಿಶ್ರೀ ಹಾಡಬೇಕು ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ಅವರು ಇಂದು ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡುತ್ತಾ, ಸರ್ಕಾರ ಗಟ್ಟಿ ನಿರ್ಧಾರ ಮಾಡಬೇಕು, ಎಲ್ಲರೂ ಒಂದಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು. ಇನ್ನು ಗಡಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ, ಯಾರೂ ಮಾಡಬಾರದು. ನಾವು ಇಷ್ಟು ವರ್ಷ ಅದನ್ನು ಮಾಡಿಲ್ಲ, ಮಾಡೋದೂ ಇಲ್ಲ. ಸರ್ಕಾರ ದಿಟ್ಟ ನಿರ್ಧಾರ ಮಾಡಿ ಈ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದರು.
TV24 News Desk
the authorTV24 News Desk

Leave a Reply