ದೇಶರಾಜ್ಯ

ಕರ್ನಾಟಕದ ಆಣೆಕಟ್ಟುಗಳಿಗೆ ನೀರು ಸರಬರಾಜು ನಿಲ್ಲಿಸಬೇಕಾಗುತ್ತದೆ: ಶಂಭುರಾಜ್ ದೇಸಾಯಿ 

ನಾಗ್ಪುರ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು, ಬಿಜೆಪಿ ಮುಖಂಡರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ತಡೆಯದಿದ್ದರೆ ಕರ್ನಾಟಕಕ್ಕೆ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಬುಧವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಎಚ್ಚರಿಕೆ ನೀಡಿದ್ದಾರೆ. 
ಒಂದು ವೇಳೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಚಿವರು, ಶಾಸಕರು ಗಡಿ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸದಿದ್ದರೆ. ಕರ್ನಾಟಕ ಆಣೆಕಟ್ಟುಗಳಿಗೆ ನೀರು ಸರಬರಾಜು ಮಾಡುವ ಬಗ್ಗೆ ಮರು ಚಿಂತನೆ ನಡೆಸಬೇಕಾಗುತ್ತದೆ ಎಂದು ದೇಸಾಯಿ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ 
ವಿಧಾನ್ ಭವನ್ ಆವರಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ದೇಸಾಯಿ, ಕರ್ನಾಟಕದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರದ ಪಾಲಾಗಲು ಬಿಡಲ್ಲ ಎಂಬ ಸಿಎಂ ಬೊಮ್ಮಾಯಿ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
TV24 News Desk
the authorTV24 News Desk

Leave a Reply