ಬೆಂಗಳೂರು ಸಿಎಂ ಬಸವರಾಜ್ ಬೊಮ್ಮಾಯಿ ಅವಧಿಗೂ ಮುನ್ನ ಚುನಾವಣೆ ನಡೆಯುವ ಸುಳಿವು ನೀಡಿದ್ದಾರೆ. ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ಚುನಾವಣೆಗೆ ಎಲ್ಲಾ ತಯಾರಿ ಮಾಡಿಕೊಳ್ಳಲು, ಇದಕ್ಕಾಗಿ ಪೊಲೀಸ್ ಇಲಾಖೆ ಸಜ್ಜುಗೊಳಿಸಲು ಸಿಎಂ ಸೂಚನೆ ನೀಡಿದ್ದಾರೆನ್ನಲಾಗಿದೆ. ಕೋವಿಡ್ನ ಹೊಸ ತಳಿ ವ್ಯಾಪಿಸುವ ಮುನ್ನ ಚುನಾವಣೆ ನಡೆಯಬಹುದು ಎಂದು ಬೊಮ್ಮಾಯಿ ಡಿಜಿಗೆ ಸುಳಿವು ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜಕೀಯ ನಾಯಕರು ಸಜ್ಜಾಗುತ್ತಿದ್ದಾರೆ. ಎಲ್ಲಾ ರೀತಿಯ ತಯಾರಿ ಆರಂಭಿಸಿದ್ದಾರೆ. ಆದರೀಗ ಈ ಸಿದ್ಧತೆಗಳ ನಡುವೆಯೇ ಅವಧಗೂ ಮೊದಲೇ ಚುನಾವಣೆ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಹೌದು ಚೀನಾ ಸೇರಿದಂತೆ ವಿಶ್ವದ ಒಟ್ಟು ಐದು ರಾಷ್ಟ್ರಗಳಲ್ಲಿ ಕೊರೋನಾ ನಿಯಂತ್ರಣ ಮೀರಿ ವ್ಯಾಪಿಸಿದೆ. ವೈದ್ಯಕೀಯ ಸೌಲಭ್ಯಗಳ ಕೊರತೆಯೂ ಕೂಡ ಬಂದಿದೆ. ಹೀಗಿರುವಾಗ ಭಾರತದಲ್ಲೂ ಈ ಹೊಸ ತಳಿ ಹರಡುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಆದೇಶ ಜಾರಿಗೊಳಿಸಿದೆ. ಈ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಚುನಾವಣಾ ಸಿದ್ಧತೆ ನಡೆಸುವಂತೆ ಸಿಎಂ ಬೊಮ್ಮಾಯಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ಸೂಚನೆ ನೀಡಿದ್ದಾರೆ.