ಬೆಳಗಾವಿಬೆಳಗಾವಿ ನಗರ

ಮೀಸಲಾತಿಗೆ ಶೀಘ್ರ ಕ್ರಮ ಸಿಎಂ ಬೊಮ್ಮಾಯಿ 

ಬೆಳಗಾವಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಸರ್ಕಾರಕ್ಕೆಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಕೂಡಲೇ ಈ ಬಗ್ಗೆ ಕಾನೂನು ಸಂಸದರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಕುರಿತು ಸದಾಶಿವ ಆಯೋಗ ಹಾಗೂ ರಂಗರಾಜು ಆಯೋಗದ ವರದಿಗಳು ಬಂದಿವೆ. ಅವು ಇಂದಿಗೂ ಆಯೋಗದ ಮಟ್ಟದಲ್ಲೇ ಉಳಿದಿರುವುದರಿಂದ ಸರ್ಕಾರದಿಂದ ಯಾವುದೇ ಕ್ರಮ‌ ಕೈಗೊಂಡಿರಲಿಲ್ಲ. ಆದರೆ, ಹೆಗಡೆ ಅವರು ಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.
ಪಂಚಮಸಾಲಿ ಸಮುದಾಯದ ಬಹು ನಿರೀಕ್ಷಿತ ಹಿಂದುಳಿದ ವರ್ಗಗಳ 2ಎಗೆ ಸೇರ್ಪಡೆ ಬೇಡಿಕೆ ವಿಷಯದಲ್ಲಿ ಈ ವರದಿ ನಿರ್ಣಾಯಕವಾಗಲಿದೆ.ಸಚಿವ ಸಂಪುಟ ಸಭೆಯಲ್ಲಿ ಈ‌ ವರದಿ ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಗಳಿದ್ದು, ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶವು‌ ವಿಜಯೋತ್ಸವವಾಗಿ ಪರಿವರ್ತನೆಯಾಗಬಹುದು.
TV24 News Desk
the authorTV24 News Desk

Leave a Reply