ಬೆಳಗಾವಿ

ಬೆಳಗಾವಿಯಲ್ಲಿ ಡಬಲ್ ಮರ್ಡರ್ ಬೆಚ್ಚಿ ಬಿದ್ದ ಶಿಂದೊಳ್ಳಿ ಜನ 

ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಸವರಾಜ ಬೆಳಗಾಂವಾಕ್ಕರ್ (23), ಗಿರೀಶ್ ನಾಗಣ್ಣನವರ್ (34) ಮೃತರು ಎಂದು ಗುರುತಿಸಲಾಗಿದೆ.
ಪಂದ್ಯಾವಳಿ ವೇಳೆ ಮೈದಾನಕ್ಕೆ ಅಪರಿಚಿತ ವಾಹನ ನುಗ್ಗಿದ್ದು, ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ವಾಹನದಿಂದ ಕೆಳಗಿಳಿದ ಅಪರಿಚಿತರು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.
TV24 News Desk
the authorTV24 News Desk

Leave a Reply