ಬೆಳಗಾವಿ: ಈ ಅಧಿವೇಶನದಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲಿಲ್ಲ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಶಾಸಕರಿಗೆ ಮಾತನಾಡಲ್ಲಿಕ್ಕೆ ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ನಿನ್ನೆ ಅಷ್ಟೇ ಅದು ಒಂದು ದಿನ ಮಾತ್ರ ಚರ್ಚೆಗೆ ಅವಕಾಶ ಮಾಡಿಕೊಟ್ಟರು.ಮೊದಲನೆಯ ದಿನವೇ ಚರ್ಚೆಗೆ ಅವಕಾಶ ಮಾಡಿಕೊಡಬೇಕಿತ್ತು.
ಅಂದು ಅವಕಾಶ ನೀಡಿದ್ದರೆ, ನಮ್ಮ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿತ್ತು, ಕೊನೆಯ ದಿನ ಅವಕಾಶ ಕೊಟ್ಟರೇ ಏನೂ ಚರ್ಚೆ ಮಾಡಲಿಕ್ಕೆ ಸಾಧ್ಯವಿಲ್ಲ.ಈ ಸುವರ್ಣ ಸೌಧದಲ್ಲಿ ಈ ಹಿಂದೆಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗಿಲಿಲ್ಲ.ಅದು ಈ ಬಾರಿಯೂ ಮುಂದುವರೆದಿದೆ.ಮೀಸಲಾತಿ ವಿಚಾರ ಅದನೆಲ್ಲಾ ಸರ್ಕಾರ ನೋಡುತ್ತೆ ಎಂದು ಸತೀಶ್ ಜಾರಕಿಹೊಳಿ
ಬೆಳಗಾವಿ ಕಿರು ಮೃಗಾಲಯದಲ್ಲಿ ಹೇಳಿದರು