ದೆಹಲಿ: ಭಾರತದ ಸ್ಟಾರ್ ವಿಕೆಟ್ಕೀಪರ್ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ವೈದ್ಯರ ಪ್ರಕಾರ, ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಬ್ ಪಂತ್ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಬ್ ಅವರ ಕಾರು ರೇಲಿಂಗ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ಸಮಯದಲ್ಲಿ, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ರಿಷಬ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಉತ್ತರಾಖಂಡದ ಮಂಗಳೂರು ಬಳಿ ಇಂದು ಬೆಳಗ್ಗೆ 5.15ರ ಸುಮಾರಿಗೆ ಅಪಘಾತಕ್ಕೀಡಾದ ಕ್ರಿಕೆಟಿಗ ರಿಷಬ್ ಪಂತ್ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ನಂತರ ಅವರ ಕಾರು ಸುಟ್ಟು ಕರಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ತಪಾಸಣೆಗಾಗಿ ಅವರನ್ನು ಡೆಹ್ರಾಡೂನ್ಗೆ ಕರೆತರಲಾಗುತ್ತಿದೆ