Uncategorizedದೇಶ

 ಭೀಕರ ರಸ್ತೆ ಅಪಘಾತ ಬಸ್-ಕಾರು ಡಿಕ್ಕಿ 9 ಮಂದಿ ದುರ್ಮರಣ 

ನವಸಾರಿ: ಗುಜರಾತ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಮತ್ತು ಎಸ್‌ಯುವಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ದುರ್ಮರಣ ಹೊಂದಿದ್ದಾರೆ.ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನವಸಾರಿ ಜಿಲ್ಲೆಯ ಅಹ್ಮದಾಬಾದ್- ಮುಂಬೈ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಎಸ್‌ಯುವಿ ಕಾರು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ.
ಇಂದು ಮುಂಜಾನೆ ಬೆಳಗಿನ ಜಾವ ನಡೆದ ಈ ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದು, 32 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಸ್ಥಳಕ್ಕಾಗಿ ಪೊಲೀಸರು, ಸ್ಥಳೀಯರು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.
ಅಡಿಷನಲ್ ಡಿಸ್ಟ್ರಿಕ್ಟ್ ಕಲೆಕ್ಟರ್ ಕೇತನ್ ಜೋಶಿ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ರಸ್ತೆ ಅಪಘಾತದಲ್ಲಿ 32 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ 17 ಮಂದಿಯನ್ನು ಸ್ಥಳೀಯ ನವಸಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 14 ಮಂದಿ ಸೂರತ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸ್ಥಳದಿಂದ ಪೊಲೀಸರು 9 ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆ ನಡೆದ ಸಮಯದಲ್ಲಿ ಫಾರ್ಚ್ಯೂನರ್ ಎಸ್‌ಯುವಿಯಲ್ಲಿ 9 ಮಂದಿ ಇದ್ದರು. ಇವರೆಲ್ಲಾರೂ ಅಂಕ್ಲೇಶ್ವರ್‌ಗೆ ಸೇರಿದ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮತ್ತೊಂದೆಡೆ ಅಪಘಾತಕ್ಕೀಡಾದ ಬಸ್ ಅಹ್ಮದಾಬಾದ್‌ನಿಂದ ವಾಲ್‌ಸಡ್‌ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದ್ದು, ಗುರುತು ಹಿಡಿಯಲಾರದಷ್ಟು ಸ್ಥಿತಿಗೆ ತಲುಪಿದೆ. ಇನ್ನ ಬಸ್ ಮುಂಭಾಗವೂ ಕೂಡ ಹಾನಿಯಾಗಿದೆ.
ಈ ಭೀಕರ ಅಪಘಾತಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದಿಲ್ಲ. ಎಸ್‌ಯುವಿ ಕಾರು ರಾಂಗ್ ರೂಟ್ ನಲ್ಲಿ ಬರುತ್ತಿತ್ತು. ಜೊತೆಗೆ ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ
TV24 News Desk
the authorTV24 News Desk

Leave a Reply