ಧಾರವಾಡ

ಮೀಸಲಾತಿಯಲ್ಲಿ ಗೊಂದಲವಿಲ್ಲ:ಸಿಎಂ ಬಸವರಾಜ ಬೊಮ್ಮಾಯಿ 

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದು‌ ಮಧ್ಯಂತರ ವರದಿ ಇದೆ. ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ  ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿದರು. ಇನ್ನೂ ಇದರಲ್ಲಿ ನಮ್ಮ ಸರ್ಕಾರದ ಉದ್ದೇಶವನ್ನು ಹೇಳಿದ್ದೇವೆ.ಮೀಸಲಾತಿ ವಿಚಾರದಲ್ಲಿ ಯಾವುದೇ ಕಾನೂನು ಗೊಂದಲವಿಲ್ಲ. ಪಂಚಮಸಾಲಿ- ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರದ ಬಗ್ಗೆ ಅನಗತ್ಯವಾಗಿ ಗೊಂದಲ ಬೇಡ. ಮೀಸಲಾತಿ ವಿಚಾರದಲ್ಲಿ ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗಲ್ಲ, ಇದು ನಮ್ಮ ಅಚಲ ನಿರ್ಧಾರ ಸಹ ಆಗಿದೆ. ಅಂತಿಮ ವರದಿಯಲ್ಲಿ ಅಂಕಿ-ಅಂಶಗಳ ಮಾಹಿತಿಯನ್ನು ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧ ಪಟ್ಟವರ ಜೊತೆ ಚರ್ಚಿಸಲಾಗುವುದು.ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ.ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು
TV24 News Desk
the authorTV24 News Desk

Leave a Reply