ಹರಿದು ಬರುತ್ತಿವ ಜನ ಸಾಗರ
ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು ಇಂದು ರಾತ್ರಿ ದೈವಾಧೀನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು
.ತಮ್ಮ 19ನೇ ವಯಸ್ಸಿನಲ್ಲೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ, ಅವರ ಮಾರ್ಗದರ್ಶನದಲ್ಲಿ ‘ತತ್ವ ಶಿರೋಮಣಿ’ ಎಂಬ ಪುಸ್ತಕವನ್ನು ಪ್ರಕಟಿಸಿದ್ದರು. ಆ ಮೂಲಕ ಚಿಕ್ಕ ವಯಸ್ಸಿಯಲ್ಲೇ ತಮ್ಮ ಆಧ್ಯಾತ್ಮಿಕತೆಯ ಪ್ರಯಾಣವನ್ನು ಆರಂಭಿಸಿದ್ದರು.
ಹುಟ್ಟೂರುನಿಂದ ಗದಗ ಜಿಲ್ಲೆಯ ನಾಗನೂರಿಗೆ ತೆರಳಿದ್ದ ಅವರು ಸದಾಶಿವ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಸಾಧಿಸಿದ್ದರು. ಇದೇ ವೇಳೆ ವೇದಾಂಗ, ಯೋಗ, ಶರಣ ತತ್ವಶಾಸ್ತ್ರದಲ್ಲಿ ಅಭ್ಯಾಸವನ್ನು ಮಾಡಿದ್ದರು. ಆ ಬಳಿಕ ಪ್ರಚನಗಳನ್ನು ನೀಡಲು ಆರಂಭಿಸಿದ್ದರು.
ಕಠಿಣ ವಿಚಾರಗಳನ್ನು ಸಹಳವಾಗಿ, ಸಂವೇದನಾಶೀಲವಾಗಿ ಹಾಗೂ ಆನಂದದಾಯಕವಾಗಿ ಪ್ರವಚನಗಳಲ್ಲಿ ತಿಳಿಸುತ್ತಿದ್ದರು. ಉತ್ತರ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಗೋವಾದಲ್ಲೂ ಹೆಚ್ಚು ಪ್ರಚಾರಗೊಂಡಿದ್ದವು. ಆಧ್ಯಾತ್ಮಿಕ ಚಟುವಟಿಕೆಗಳ ಜೊತೆಗೆ ಕಾಲೇಜು ಅಭ್ಯಾಸವನ್ನು ಮುಂದುವರಿಸಿದ್ದ ಶ್ರೀಗಳು, ತತ್ವಶಾಸ್ತ್ರದಲ್ಲಿ ಎಂಎ ಪದವಿಯನ್ನು ಕೊಲ್ಲಾಪುರ ವಿಶ್ವವಿದ್ಯಾಲಯದಿಂದ ಪಡೆದುಕೊಂಡಿದ್ದರು.
ಐದು ಭಾಷೆಗಳಲ್ಲಿ ಪಾಂಡಿತ್ಯ ಗಳಿಸಿದ್ದ ಸ್ವಾಮೀಜಿಗಳು
ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳ ಮೇಲೆ ಶ್ರೀಗಳು ಪಟ್ಟು ಸಾಧಿಸಿದ್ದರು. ಅತ್ಯಂತ ಸರಳ ಜೀವನ ಮೂಲಕವೇ ಎಲ್ಲರಿಗೂ ಮಾದರಿಯಾಗಿನಿಂತ ಸಿದ್ದೇಶ್ವರರು, ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮಿಗಳ ಸ್ವಾಮೀಜಿಗಳಿಂದ ಕಲಿತ ಜೀವನ ಮೌಲ್ಯಗಳನ್ನು ತಮ್ಮ ಉಪನ್ಯಾಸದ ಮೂಲಕ ಹೇಳುತ್ತಿದ್ದರು.
ಬದುಕುವುದು ಹೇಗೆ, ಬದುಕಿನ ದಾರಿ ಎಂಬ ಪ್ರವಚನಗಳು ಸಾಕಷ್ಟು ಜನರಿಗೆ ಜೀವನದ ಕುರಿತ ಮಾರ್ಗದರ್ಶವನ್ನು ನೀಡಿವೆ. ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂದ ಯೋಗಾಶ್ರಮದ ಜವಾಬ್ದಾರಿ ವಹಿಸಿಕೊಂಡು ಬಂದು, ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣಕ್ಕಾಗಿ ಪಡುತ್ತಿದ್ದ ಕಷ್ಟವನ್ನು ಗಮನಿಸಿ ಊಟ, ವಸತಿಗಳೊಂದಿಗೆ ಶಿಕ್ಷಣ ಕೇಂದ್ರಗಳನ್ನು ಆರಂಭಿಸಿದ್ದರು. ಇದರಿಂದ ಸಾವಿರಾರು ಮಕ್ಕಳು ಶಿಕ್ಷಣವನ್ನು ಪಡೆದುಕೊಂಡಿದ್ದಾರೆ.