ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಅವರ ಅಗಲಿಕೆಯಿಂದ ಇಡಿ ಕರುನಾಡು ಕಣ್ಣಿರು ಹಾಕುತ್ತಿದೆ. ಅವರ ಪಾರ್ಥಿವ ಶರೀರವನ್ನು ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ಜಾವವೇ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಕಿದ ಕಾರಿಡಾರ್ ಸಂಪೂರ್ಣ ಭರ್ತಿಯಾಗಿವೆ. ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೂಡ ಮಾಡಲಾಗಿದೆ.
ಶ್ರೀಗಳನ್ನು ನೆನೆದು ಕಣ್ಣೀರು ಹಾಕಿದ ಮುಸ್ಲಿಂ ದಂಪತಿಗಳು
ರಾಜ್ಯ ಅಷ್ಟೇ ಅಲ್ಲದೇ ಹೊರ ರಾಜ್ಯಗಳಿಂದಲೂ ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಭಕ್ತರು ಬರುತ್ತಿದ್ದಾರೆ. ಸಿದ್ದೇಶ್ವರಶ್ರೀ ಸರ್ವಧರ್ಮ ಸಂತರಾಗಿದ್ದರು, ಯಾವತ್ತು ಜಾತಿ, ಧರ್ಮದ ಬೇಧ ಮಾಡಲಿಲ್ಲ, ಎಲ್ಲ ಮನುಷ್ಯರು ಒಂದೇ ಎನ್ನುತ್ತಿದ್ದರು. ಈ ಹಿಂದೆ ಸ್ವಾಮೀಜಿ ಪ್ರವಚನಕ್ಕೆ ಹೋಗಿದ್ದೇವು ಎಂದು ಸ್ವಾಮೀಜಿಯನ್ನ ನೆನೆಯುತ್ತಾ ಕಣ್ಣೀರು ಹಾಕುತ್ತಿರುವ ಮುಸ್ಲಿಂ ದಂಪತಿಗಳು.