ಬೆಂಗಳೂರು: ಸಚಿವ ಸ್ಥಾನ ಕಳೆದುಕೊಂಡು ಸ್ವಪಕ್ಷದ ನಾಯಕರ ಮೇಲೆ ಮುನಿಸಿಕೊಂಡಿರುವ ರಮೇಶ ಜಾರಕಿಹೊಳಿ ಮತ್ತೆ ಸಚಿವ ಸ್ಥಾನ ನೀಡುವಂತೆ ಲಾಭಿ ನಡೆಸಿದ್ದಾರೆ. ಆದರೆ, ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ. ಸಧ್ಯ ರಮೇಶ ಜಾರಕಿಹೊಳಿ ಅವರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿಮಾಡಿದ್ದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ
ರಮೇಶ ಜಾರಕಿಹೊಳಿ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಇದೇ ಕಾರಣಕ್ಕೆ ಭೇಟಿ ಆಗಿರಬಹುದು ಎಂದು ಹೇಳಲಾಗುತ್ತಿದೆ. ರಮೇಶ ಜಾರಕಿಹೊಳಿ ಸಿದ್ದರಾಮಯ್ಯನವರ ಶಿಷ್ಯರೆಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಮರಳಿ ಕಾಂಗ್ರೆಸ್ಗೆ ಸೇರುವ ಬಯಕೆಯನ್ನು ರಮೇಶ ಜಾರಕಿಹೊಳಿ ಹೊಂದಿರಬಹುದು. ಈ ಕಾರಣಕ್ಕೆ ಸಿದ್ದರಾಮಯ್ಯನವರನ್ನು ಭೇಟಿಯಾಗಿ ರಮೇಶ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿರಬಹುದು ಎನ್ನಲಾಗಿದೆ.
ಬೆಳಗಾವಿಯ ಪ್ರಭಾವಿ ನಾಯಕ ರಮೇಶ ಜಾರಕಿಹೊಳಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿಮಾಡಿ ಮಹತ್ವದ ಚರ್ಚೆ ನಡೆಸಿದ್ದು, ರಾಜರಾಜಕೀಯದಲ್ಲಿ ಹೊಸದೊಂದು ಸಂಚಲನವೇ ಸೃಷ್ಟಿಯಾಗಿದೆ.