ಮುಧೋಳ:ಯಲ್ಲಮ್ಮ ದೇವಿ ಜಾತ್ರೆಯಿಂದ ಹಿಂತಿರುಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಮುಧೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ.
ಟ್ರ್ಯಾಕ್ಟರ್ ಚಾಲಕರಿಬ್ಬರ ನಿರ್ಲಕ್ಷದಿಂದ ಘಟನೆ ನಡೆದಿದೆ. ಓವರ್ಟೇಕ್ ಮಾಡುವ ಭರಾಟೆಯಲ್ಲಿ ಅಪಘಾತ ಸಂಭವಿಸಿದೆ. ಓವರ್ಟೇಕ್ ಮಾಡಲು ಹೋಗಿ ಇನ್ನೊಂದು ಟ್ರ್ಯಾಕ್ಟರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂವರ ಕಾಲು ಮುರಿದಿದೆ.ಮೃತರಾದ ಗೋವಿಂದ್ ಪಾಟೀಲ್(20), ಹನಮಂತ ಬೊಮ್ಮಕ್ಕನವರ(20) ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದವರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.