ಬಾಗಲಕೋಟೆ

ಟ್ರ್ಯಾಕ್ಟರ್ ಪಲ್ಟಿ 3 ಜನ ಸ್ಥಳದಲ್ಲಿಯೇ ಸಾವು ಇನ್ನಿಬ್ಬರಿಗೆ ಗಂಭೀರ ಗಾಯ

ಮುಧೋಳ:ಯಲ್ಲಮ್ಮ ದೇವಿ ಜಾತ್ರೆಯಿಂದ ಹಿಂತಿರುಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು  ಸಾವನ್ನಪ್ಪಿದ ಘಟನೆ ಮುಧೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ.
ಟ್ರ್ಯಾಕ್ಟರ್ ಚಾಲಕರಿಬ್ಬರ ನಿರ್ಲಕ್ಷದಿಂದ ಘಟನೆ ನಡೆದಿದೆ. ಓವರ್​ಟೇಕ್ ಮಾಡುವ ಭರಾಟೆಯಲ್ಲಿ ಅಪಘಾತ ಸಂಭವಿಸಿದೆ. ಓವರ್​​ಟೇಕ್ ಮಾಡಲು ಹೋಗಿ ಇನ್ನೊಂದು ಟ್ರ್ಯಾಕ್ಟರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂವರ ಕಾಲು ಮುರಿದಿದೆ.ಮೃತರಾದ ಗೋವಿಂದ್ ಪಾಟೀಲ್(20), ಹನಮಂತ ಬೊಮ್ಮಕ್ಕನವರ(20) ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದವರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply