ಹಾವೇರಿ

ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮೇಳನದ ಸರ್ವಾಧ್ಯಕ್ಷರಾದ ದೊಡ್ಡರಂಗೇಗೌಡರಿಗೆ ಅಭಿನಂದನೆಗಳು. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ ಎಂದರು.
ಕನ್ನಡ ಹೋರಾಟಗಾರರ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ. ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕಳಸ ಬಂಡೂರಿ ಯೋಜನೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಉತ್ತರ ಕರ್ನಾಟಕ ಭಾಗದ ಜನರ ಕನಸು ನನಸಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೂ ಶೀಘ್ರವೇ ಅನುಮತಿ ಸಿಗುವ ಭರವಸೆ ಇದೆ ಎಂದರು.
2008 ರಿಂದ ಕನ್ನಡ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದಿದೆ.  ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ 13.30 ಕೋಟಿ ರೂ. ನೆರವು ದೊರೆತಿದೆ.  ಮೈಸೂರು ವಿವಿಯ ದೊಡ್ಡ  ಕಟ್ಟಡವೊಂದನ್ನು ಈಗಾಗಲೇ ಅಧ್ಯಯನ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಿಎಂ  ಹೇಳಿದರು.
ಶಾಸ್ತ್ರೀಯ ಭಾಷೆ ಕುರಿತ ಸಂಶೋಧನೆ,  ಗ್ರಂಥಾಲಯ, ಚರ್ಚೆಗಳಿಗೆ ಮಾರ್ಗದರ್ಶನ ಮಾಡಲು ಸಮ್ಮೇಳನಾಧ್ಯಕ್ಷರ ಮಾರ್ಗದರ್ಶನದಲ್ಲಿ ನಾಡಿನ ಹಿರಿಯ ಸಾಹಿತಿಗಳ ಸಮಿತಿ ರಚಿಸಲಾಗುವುದು. ಸಮಿತಿ ಸೂಚಿಸುವ ಕಾರ್ಯಗಳಿಗೆ ಎಷ್ಟು ಅನುದಾನ ಬೇಕಾದರೂ ಸರ್ಕಾರ ಒದಗಿಸಲಿದೆ. ಹಾವೇರಿ ಜಿಲ್ಲಾ ಕಸಾಪ ಭವನ ನಿರ್ಮಾಣಕ್ಕೆ 3 ಕೋಟಿ ರೂ.ಒದಗಿಸಲಾಗುವುದು.ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಅಲ್ಲೊಂದು ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಕಸಾಪ ರೂಪಿಸಬೇಕು ಎಂದರು.
TV24 News Desk
the authorTV24 News Desk

Leave a Reply