ಧಾರವಾಡ

ಜನವರಿ 12ರಂದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ

ಹುಬ್ಬಳ್ಳಿ, ಜನವರಿ, 06: ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ ಸಿದ್ಧತೆ ಕಾರ್ಯ ಭರದಿಂದ ಸಾಗಿದ್ದು, ಬಣ್ಣ ಹಚ್ಚುವ ಹಾಗೂ ಸ್ವಚ್ಚತಾ ಕಾರ್ಯ ಜೋರಾಗಿ ನಡೆದಿದೆ. ಇನ್ನು ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಅವರ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ಆಯಕಟ್ಟಿನ ಪ್ರದೇಶದಲ್ಲಿ ಸಾಕಷ್ಟು ಸಿದ್ಧತೆ ಕಾರ್ಯವನ್ನು ನಡೆಸಿದ್ದು, ಮದುವಣಗಿತ್ತಿಯಂತೆ ಕಂಗೊಳಿಸಲು ಹುಬ್ಬಳ್ಳಿ ಧಾರವಾಡ ಅವಳಿನಗರ ಸಿದ್ಧವಾಗುತ್ತಿದೆ.
ಜನವರಿ 12 ರಿಂದ 16ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು .
TV24 News Desk
the authorTV24 News Desk

Leave a Reply