ಸವದತ್ತಿ: ಗುರ್ಲ ಹೊಸೂರಿನಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕರು ನೀರಿನ ಸಂಪ್ ನಲ್ಲಿ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಗುರ್ಲ ಹೊಸೂರಿನ , ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ, ಶ್ಲೋಕ ಶಂಭುಲಿಂಗಪ್ಪ ಗುಡಿ (4), ಚಿದಾನಂದ ಪ್ರಕಾಶ ಸಾಲುಂಕೆ ( 4) ಮೃತಪಟ್ಟ ಮಕ್ಕಳು. ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದು ಮೃತ ಹೊಂದಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.