ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದ್ದು, ರಾಜ್ಯ ಕಾಂಗ್ರೆಸ್ ನಾಯಕರು ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ. ಶತಾಯಗತಾಯ ಈ ಬಾರಿ ಪೂರ್ಣ ಬಹುಮತದೊಂಗೆ ಅಧಿಕಾರದ ಚುಕ್ಕಾಣಿ ಹಿಡಯಲು ಟೊಂಕ ಕಟ್ಟಿ ನಿಂತಿದ್ದಾರೆ. ಹೀಗಾಗಿ ಭಾರತ ಜೋಡೋ ಯಾತ್ರೆ ನಂತರ ರಾಜ್ಯದಲ್ಲಿ ಬಸ್ ಯಾತ್ರೆ ಮಾಡಲು ನಿರ್ಧರಿಸಿದ್ದು, ನಾಳೆಯಿಂದ ಕಾಂಗ್ರೆಸ್ನ ಬಸ್ ಯಾತ್ರೆ ಪ್ರಾರಂಭವಾಗಲಿದೆ.ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ ಎಂಬ ಘೋಷ ವಾಕ್ಯದೊಂದಿಗೆ ಜನವರಿ 11ರಿಂದ ರಾಜ್ಯದಲ್ಲಿ ಕಾಂಗ್ರೆಸ್ನ ಪ್ರಜಾಧ್ವನಿ ಬಸ್ ಯಾತ್ರೆ ಆರಂಭವಾಗುತ್ತದೆ ಎಂದು ನಿನ್ನೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದರು. ಬೆಳಗಾವಿಯ ಟಿಳಕವಾಡಿಯಿಂದ ಬಸ್ ಯಾತ್ರೆ ಆರಂಭವಾಗಲಿದೆ. ಅಂದು ಬ್ರಿಟಿಷ್”ರನ್ನ ತೊಲಗಿಸಿ ಎಂಬ ಘೋಷ ವಾಕ್ಯ ಇತ್ತು, ಈಗ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಿ ಎಂಬ ಘೋಷ ವಾಕ್ಯದಿಂದ ಅಭಿಯಾನ ಆರಂಭವಾಗಲಿದೆ. ಕೇಂದ್ರ, ರಾಜ್ಯದ ಪ್ರಮುಖ ನಾಯಕರು ಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ ಬಸ್ ಯಾತ್ರೆಯ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ರಾಯರೆಡ್ಡಿ ಹೇಳಿದ್ದರು.
ಬಸ್ ಯಾತ್ರೆ ಎಲ್ಲೆಲ್ಲಿ
ಬೆಳಗಾವಿಯಿಂದ ಶುರುವಾಗುವ ಬಸ್ ಯಾತ್ರೆ ಒಟ್ಟೂ 21 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಜನವರಿ 11ರಂದು ಬೆಳಗಾವಿ ಜಿಲ್ಲೆ, ಜನವರಿ 16ರಂದು ಹೊಸಪೇಟೆ, ಜನವರಿ 17ರಂದು ಕೊಪ್ಪಳ, ಜನವರಿ 18ರಂದು ಬಾಗಲಕೋಟೆ-ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ, ಜನವರಿ 19ರಂದು ಹಾವೇರಿ-ದಾವಣಗೆರೆ ಜಿಲ್ಲೆ, ಜನವರಿ 21 ಹಾಸನ-ಚಿಕ್ಕಮಗಳೂರು, ಜನವರಿ 22 ಉಡುಪಿ-ದಕ್ಷಿಣ ಕನ್ನಡ. ಜನವರಿ 23 ಕೋಲಾರ-ಚಿಕ್ಕಬಳ್ಳಾಪುರ, ಜನವರಿ 24 ತುಮಕೂರು-ಬೆಂಗಳೂರು ಗ್ರಾಮಾಂತರ ಜನವರಿ 25 ಚಾಮರಾಜನಗರ-ಮೈಸೂರು, ಜನವರಿ 26 ಮಂಡ್ಯ ಮತ್ತು ರಾಮನಗರ, ಜನವರಿ 27 ಯಾದಗಿರಿ-ಕಲಬುರಗಿ.