ರಾಜ್ಯ

ಸ್ಯಾಂಟ್ರೋ ರವಿ ವಿಚಾರಣೆ ತೀವ್ರಗೊಳಿಸಿದ ಪೊಲೀಸರು 

ಬೆಂಗಳೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೋ ರವಿಯನ್ನು  ಕರ್ನಾಟಕ ಪೊಲೀಸರು ಗುಜರಾತ್​ನಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದಿದ್ದಾರೆ.
ರಾಯಚೂರು, ಮಂಡ್ಯ ಹಾಗೂ ಮೈಸೂರು ಪೊಲೀಸರು ಸಂಘಟಿತ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಇದ್ದುದನ್ನು ಪತ್ತೆ ಮಾಡಿದ್ದರು. ನಂತರ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ರಾತ್ರಿ 11.30ಕ್ಕೆ ‘ಆಕಾಶ್ ಏರ್’ ವಿಮಾನದಲ್ಲಿ ರವಿಯನ್ನು ಬೆಂಗಳೂರಿಗೆ ಕರೆತರಲಾಯಿತು. ರಸ್ತೆ ಮಾರ್ಗದಲ್ಲಿ ರವಿಯನ್ನು ಮೈಸೂರಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ನ್ಯಾಯಾಧೀಶರ ಎದುರು ರವಿಯನ್ನು ಹಾಜರಿಪಡಿಸಲಾಗುವುದು. ನಂತರ ಪೊಲೀಸರು ತೀವ್ರ ವಿಚಾರಣೆಗೊಳಿಸಲಿದ್ದಾರೆ.
ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ಇರಬಹುದು ಎಂಬ ಅನುಮಾನದ ಮೇಲೆ ಕರ್ನಾಟಕ ಪೊಲೀಸರ ತಂಡವನ್ನು ತರಾತುರಿಯಲ್ಲಿ ಅಹಮದಾಬಾದ್​ಗೆ ಕಳಿಸಲಾಗಿತ್ತು. ಈ ಪೈಕಿ ಮೈಸೂರು ಪೊಲೀಸರ ಬಳಿ ಸ್ಯಾಂಟ್ರೋ ರವಿಯ ಹಳೆಯ ಮೂರು ಫೋಟೊಗಳಿದ್ದವು. ಅವನ ತಲೆಯಲ್ಲಿ ಕೂದಲು ಇಲ್ಲ. ಹೀಗಾಗಿ ಟೋಪನ್ ಧರಿಸುತ್ತಾನೆ ಎಂಬ ಮಾಹಿತಿಯಿದ್ದ ಪೊಲೀಸರು ಬೋಳುತಲೆ, ಗಡ್ಡಮೀಸೆ ಇಲ್ಲದ ರೇಖಾಚಿತ್ರಗಳನ್ನು ಬರೆಸಿಕೊಂಡು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದರು. ಪೊಲೀಸರ ಲೆಕ್ಕಾಚಾರದಂತೆ ಅವನೂ ಗುರುತು ಬದಲಿಸಿಕೊಂಡಿದ್ದ. ಆದರೆ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು ಅವನನ್ನು ಗುರುತಿಸಿ ಬಂಧಿಸುವಲ್ಲಿ ಯಶಸ್ವಿಯಾದರು.
TV24 News Desk
the authorTV24 News Desk

Leave a Reply