ದೇಶ

ಶಬರಿಮಲೆಯಲ್ಲಿ ಕಂಡು ಬಂದ ಮಕರಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪನ ಭಕ್ತರು 

ಶಬರಿಮಲೆಯ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರಜ್ಯೋತಿ ಮೂಡುವ ಮೂಲಕ ಭಕ್ತ ಸಾಗರಕ್ಕೆ  ಮಣಿಕಂಠ ಸ್ವಾಮಿ ದರ್ಶನ ನೀಡಿದ್ದಾನೆ.  ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು  ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರ ಬಂದಿದ್ದರು. ಅಯ್ಯಪ್ಪನ ದರ್ಶನದ ಜೊತೆಗೆ  ಮಕರಜ್ಯೋತಿ ದರ್ಶನವನ್ನು ಅಯ್ಯಪ್ಪ ಸ್ವಾಮಿ ಭಕ್ತರು  ಕಣ್ತುಂಬಿಕೊಂಡರು,ಸ್ವಾಮಿಯೇ ಅಯ್ಯಪ್ಪ ಎನ್ನುವ ಮಂತ್ರ ಘೋಷಣೆ ಮೂಲಕ ಈ ಕ್ಷಣಕ್ಕೆ ಸಾಕ್ಷಿಯಾದರು. 
ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಈ ಮಕರಜ್ಯೋತಿ ಗೋಚರಿಸುವುದು. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಣಿಕಂಠನ ರೂಪದಲ್ಲಿ ಈ ಜ್ಯೋತಿ ಮೂಡುವುದು. ಈ ಜ್ಯೋತಿ ರೂಪದಲ್ಲಿ ಮೂರು ಸಲ ಗೋಚರಿಸಿದೆ. ಮಕರಜ್ಯೋತಿಯನ್ನು ಕಣ್ತುಂಬಿಕೊಳ್ಳಲು ನೆರೆದಿರುವ ಅಯ್ಯಪ್ಪ ಭಕ್ತರಿಗೆ ಇದೊಂದು ಸಂತಸದ ವಾತಾವರಣವನ್ನು ನಿಮಾರ್ಣ ಮಾಡುತ್ತದೆ. 
TV24 News Desk
the authorTV24 News Desk

Leave a Reply