ವಿಜಯಪುರ :ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ನಗರದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರೆಸುವವರ ಬಗ್ಗೆ ನಾನು ಮಾತನಾಡಿದ್ದೇನೆ. ಇನ್ನು ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.