ಬಾಗಲಕೋಟೆ

 ಇಬ್ಬರು ಮಕ್ಕಳೊಂದಿಗೆ ಮಲಪ್ರಭಾ ನದಿಗೆ ಹಾರಿ ತಾಯಿ ಆತ್ಮಹತ್ಯೆ 

ಹುನಗುಂದ: ಮಲಪ್ರಭಾ ‌ನದಿಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ತಾಲೂಕಿನ ಕಮತಗಿಯಲ್ಲಿ ನಡೆದಿದೆ.
ಸೂಳೇಭಾವಿ ಗ್ರಾಮದ ನಿವಾಸಿ ಉಮಾ ಮಾಸರೆಡ್ಡಿ (45), ಸೌಂದರ್ಯ (18) ಹಾಗೂ ಐಶ್ವರ್ಯ (20) ಮೃತ ದುರ್ದೈವಿಗಳು.
ಐಶ್ವರ್ಯ ಬೆಂಗಳೂರಿನಲ್ಲಿ ಬಿಇ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದರು.‌ ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೌಟುಂಬಿಕ ಕಲಹದಿಂದ ಬೆಸತ್ತು ಪತ್ರ  ಬರೆದಿಟ್ಟು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತದೇಹಗಳಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
TV24 News Desk
the authorTV24 News Desk

Leave a Reply