ಬೆಳಗಾವಿ: ಕಾಂಗ್ರೆಸ್ ನಿಂದ ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ವಿಚಾರ ಯಾವ ಕಾರಣಕ್ಕೂ ಕೋಲಾರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲ ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು ನಾನು ಭವಿಷ್ಯ ಹೇಳುತ್ತಿಲ್ಲ ಅವರು ಕೋಲಾರದಿಂದ ನಿಲ್ಲುವುದಿಲ್ಲ ಡ್ರಾಮಾ ಮಾಡುತ್ತಿದ್ದಾರೆ ಮೈಸೂರಿಗೆ ಬರೋಕೆ ಪ್ರಯತ್ನ ಮಾಡುತ್ತಿದ್ದಾರೆ.
ಕೋಲಾರದಲ್ಲಿ ನಿಂತುಕೊಂಡ್ರೇ ಅವರು ಮನೆಗೆ ಹೋಗುವುದು ನಿಶ್ಚಿತ ಅಂತಾ ಹೇಳಿದ ಅವರು ಸುಮ್ಮನೆ ರಾಜಕೀಯ ಡೋಂಬರಾಟ, ನಾಟಕ ಮಾಡುತ್ತಿದ್ದಾರೆ.
ನನ್ನ ಪ್ರಕಾರ ಅವರು ಕೋಲಾರದಲ್ಲಿ ನಿಲ್ಲುವುದಿಲ್ಲ ಮೈಸೂರಿಗೆ ಹೋಗಬಹುದು. ಆದಾದ ಬಳಿಕ ಮುಂದಿನ ಸ್ಟ್ಯಾಟರ್ಜಿ ಮಾಡಬೇಕು ಮಾಡ್ತೇವಿ.
ಸಿದ್ದರಾಮಯ್ಯ ಎರಡು ಕಡೆಯಾದ್ರೂ ಸ್ಪರ್ಧೆ ಮಾಡಲಿ ಮೂರು ಕಡೆಯಾದ್ರೂ ಮಾಡಲಿ ಮನೆಗೆ ಹೋಗುವುದು ನಿಶ್ಚಿತ ಎಂದು ಹೇಳಿದರು