ಬೆಳಗಾವಿ: ವಾಹನವೊದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂಕೇಶ್ವರ ನಗರದ ಹೊರವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ.
ಈ ಅಪಘಾತದಲ್ಲಿ ಬೈಕ್ ಸವಾರನ ಶವವು ಮೂರು ಭಾಗವಾಗಿ ತುಂಡರಿಸಿದಂತಾಗಿದೆ. ಸ್ಥಳದಲ್ಲಿ ಮೃತಪಟ್ಟಿರುವ ವ್ಯಕ್ತಿಯು ಯಾವ ಊರಿನವರು ಎನ್ನುವ ಬಗ್ಗೆ ಇನ್ನು ವರೆಗೆ ಮಾಹಿತಿ ಲಭ್ಯವಾಗಿಲ್ಲ. ಬೈಕ್ ಗೆ ಡಿಕ್ಕಿ ಹೊಡೆದು ಫರಾರಿಯಾಗಿರುವ ವಾಹನ ಪತ್ತೆ ಹಚ್ಚಲು ಸಂಕೇಶ್ವರ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.