ಬೆಳಗಾವಿ: ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಲು ಚುನಾವಣಾ ಚಾಣಕ್ಯ ಅಮಿತ್ ಶಾ 28ರಂದು ಎಂ ಕೆ ಹುಬ್ಬಳ್ಳಿಗೆ ಬರುತ್ತಿದ್ದಾರೆ.
ಜ.27ರ ರಾತ್ರಿ ಹುಬ್ಬಳ್ಳಿಗೆ ಅಗಮಿಸಿ ಅಮಿತ್ ಶಾ ವಾಸ್ತವ್ಯ ಹೂಡಲಿದ್ದಾರೆ. ಜ.28ರ ಬೆಳಗ್ಗೆ 10ಗಂಟೆಗೆ ಅಮಿತ್ ಶಾ ಕುಂದಗೋಳಕ್ಕೆ ತೆರಳಲಿದ್ದಾರೆ. ಕುಂದಗೋಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗಿ ಬಳಿಕ ಕೆಎಲ್ಇ ಸಂಸ್ಥೆಯ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಬಳಿಕ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನ ಕೇಂದ್ರದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.45ಕ್ಕೆ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಗೆ ಆಗಮಿಸಿ ಬೆಳಗಾವಿಯಲ್ಲಿ ಸರಣಿ ಸಭೆಗಳನ್ನ ಅಮಿತ್ ಶಾ ನಡೆಸಲಿದ್ದಾರೆ.