ಹುಬ್ಬಳ್ಳಿ: ಆರ್ಥಿಕತೆಯಲ್ಲಿ ಭಾರತ ಮುಂಚೂಣಿ ಸ್ಥಾನದಲ್ಲಿ ಮುನ್ನಡೆಯುತ್ತಿದೆ. ಭಾರತ ಸರ್ಕಾರದ ನೀತಿಗಳಿಗೆ ಅನೇಕ ರಾಷ್ಟ್ರಗಳಿಂದ ಮೆಚ್ಚುಗೆ ದೇಶದಲ್ಲಿ ಮೂರು ಕೋಟಿಗೂ ಹೆಚ್ಚು ಜನರು ಲಕ್ಷಾಧೀಶರಿದ್ದಾರೆ. ದೇಶದ ಜನರ ಆರ್ಥಿಕತೆ ಸುಧಾರಿಸುತ್ತಿದೆ ಎಂದು ಅರುಣ್ ಸಿಂಗ್ ತಿಳಿಸಿದರು. ಶಿಸ್ತು ಸಮಿತಿಯಿಂದ ಶಾಸಕ ಯತ್ನಾಳ್ಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿದ ಬಳಿಕ ಈಗ ಮಾತನಾಡುವುದನ್ನು ಬಿಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಬಿಜೆಪಿ ಅಶಿಸ್ತನ್ನು ಒಪ್ಪಿಕೊಳ್ಳಲ್ಲ. ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ನಗರದಲ್ಲಿಂದು ಖಾಸಗಿ ಹೊಟೇಲ್ ನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ನಂತರವೂ ಜಗಳ ಮುಂದುವರಿಯಲಿದೆ. ಜಗಳ ಆಡುವವರು ಜನರಿಗೆ ಒಳ್ಳೆಯ ಆಡಳಿತ ಕೊಡಲು ಸಾಧ್ಯವೇ..? ಎಂದು ಪ್ರಶ್ನಿಸಿದ ಅವರು, ಹೀಗಾಗಿ ಬಿಜೆಪಿಯೇ ಒಳ್ಳೆಯ ಆಯ್ಕೆಯಾಗಿದೆ ಎಂದು ಜನರು ನಂಬಿದ್ದಾರೆ. ಕಾಂಗ್ರೆಸ್ ನಾಯಕರು ಫ್ರೇಷ್ಟೇಷನ್ ನಲ್ಲಿದ್ದಾರೆ. ಹೀಗಾಗಿ ನಮ್ಮ ನಾಯಕರ ಮೇಲೆ ಬಾಯಿಗೆ ಬಂದಂತೆ ಮಾತನಾಡುತ್ತಿದಾರೆ ಎಂದು ಅವರು ಹೇಳಿದರು.