ಬೆಳಗಾವಿಬೆಳಗಾವಿ ನಗರ

 ಬಜೆಟನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಿ :ಕರವೇ 

ಬೆಳಗಾವಿ: ಪ್ರಸಕ್ತ ಸಾಲಿನ ಬಜೆಟನಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವಂತೆ ಆಗ್ರಹಿಸಿ ಇಂದು ಕರವೇ ಕಾರ್ಯಕರ್ತರು ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
 ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ  ಸುದ್ದಿಗಾರರೊಂದಿಗೆ ಮಾತನಾಡಿ ಬೆಳಗಾವಿ ವಿಮಾನ ನಿಲ್ದಾಣದಿಂದ ರದ್ದಾಗಿರುವ ಎಲ್ಲ ವಿಮಾನ ಸೇವೆಗಳನ್ನು ಪುನರಾರಂಭ ಮಾಡಲು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕು.ಬೆಳಗಾವಿಯ ಅದ್ದೂರಿ ರಾಜ್ಯೋತ್ಸವದ ಆಚರಣೆಗೆ ಪ್ರತಿ ವರ್ಷ 2 ಕೋಟಿ ರೂ. ಅನುದಾನ ನೀಡುವ ನಿರ್ಧಾರವನ್ನು ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಹಾಗೂ ರಾತ್ರಿ ವೇಳೆ ಮೆರವಣಿಗೆಗೆ ವಿಸ್ತರಣೆ ಮಾಡಬೇಕು. ಅಲ್ಲದೆ, ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.ಬೆಳಗಾವಿಯಲ್ಲಿರುವ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡುವ ನಿರ್ಧಾರವನ್ನು ಬಜೆಟ್ ನಲ್ಲಿ ಪ್ರಕಟಿಸಬೇಕು. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಗೆ ಒಂದು ಸಾವಿರ ಹೊಸ ಬಸ್ ಗಳನ್ನು ಸರಕಾರ ಖರೀದಿ ಮಾಡಬೇಕೆಂದು ಆಗ್ರಹಿಸಿದರು. ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಪ್ರತಿಯೊಂದು ಜಿಲ್ಲೆಗೆ ತಲಾ 500 ಕೋಟಿ ರೂ. ವಿಶೇಷ ಅನುದಾನ ನೀಡಿ ತಾರತಮ್ಯ ನಿವಾರಣೆ ಮಾಡಬೇಕು. ಮಹಿಳೆಯರ ಉನ್ನತ ಶಿಕ್ಷಣಕ್ಕಾಗಿ ಸರಕಾರದಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಸುರೇಶ ಗವನ್ನರ, ಗಣೇಶ ರೋಕಡೆ, ಶಿವಾನಂದ ತಂಬಾಕಿ, ರಮೇಶ ಯರಗಣ್ಣವರ ಬಾಳು ಜಡಗಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
TV24 News Desk
the authorTV24 News Desk

Leave a Reply