ಬೆಳಗಾವಿ

ಹಳೆ ವೈಷಮ್ಯ ಹಿನ್ನಲೆ, ಜಾತ್ರೆ ವೇಳೆ ಯುವಕನಿಗೆ ಚಾಕು ಇರಿತ.!

ಗೋಕಾಕ: ಗೋಕಾಕ್‌ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ಜಾತ್ರೆಯ ಸಂಭ್ರಮದಲ್ಲಿದ್ದ ಯುವಕನೊಬ್ಬನ ಮೇಲೆ ಚೂರಿಯಿಂದ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಗೋಕಾಕ ಫಾಲ್ಸ್‌ನ ವಾಲ್ಮೀಕಿ ನಗರದ ನಿವಾಸಿ ವಿನೋದ ಬೇಟಗೇರಿ (28 ) ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಆತನನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿನೋದ ಜಾತ್ರೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ 7 ಜನರ ಗುಂಪು ದಾಳಿ ನಡೆಸಿದೆ. ಹಳೆ ವೈಷಮ್ಯದಿಂದ ಈ ದಾಳಿ ನಡೆದಿದೆ. ಇನ್ನೂ ದಾಳಿ ಮಾಡಿದವರ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಹೀಗಾಗಿ ಅವರು ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಇತರ 6 ಜನರಿಗೆ ಹುಡುಕಾಟ ನಡೆಸುತ್ತಿದ್ದಾರೆ.ಗೋಕಾಕ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
TV24 News Desk
the authorTV24 News Desk

Leave a Reply