ಬೆಂಗಳೂರು: ಇತ್ತೀಚಿಗೆ ಆರಂಭಗೊಂಡಿದ್ದ ಮೈಸೂರು-ಚೆನ್ನೈ ನೈ ನಡುವಿನ ವಂದೇ ಭಾರತ ಎಕ್ಸಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಕೆ ಆರ್ ಪುರಂ ಸಮೀಪ ನಡೆದಿದೆ.
ಕಳೆದ ರಾತ್ರಿ ಈ ಘಟನೆಯಲ್ಲಿ ರೈಲಿನ ಬೋಗಿಯೊಂದರ ಗಾಜಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಕೂಡ ಗಾಯಗೊಂಡಿದ್ದಾರೆ ಎಂದು ನೈಋತ್ಯ ರೈಲೆ ಇಲಾಖೆ ಅಕಾರಿಗಳು ತಿಳಿಸಿದ್ದಾರೆ.ಸದ್ಯ ಕಿಡಿಗೇಡಿಗಳಿಗಾಗಿ ರೇಲ್ವೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಇನ್ನು ಕಳೆದ ಜನವರಿಂದ ಒಟ್ಟು 21 ಕಲ್ಲು ತೂರಾಟ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ವಿಭಾಗದಲ್ಲಿ ಇನ್ನೂ 13 ಪ್ರಕರಣಗಳು ದಾಖಲಾಗಿವೆ ಎಂದು ನೈರುತ್ಯ ರೇಲ್ವೆ ಇಲಾಖೆ ಮಾಹಿತಿ ನೀಡಿದೆ. ನವೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಚೆನ್ನೈ ನಡುವಿನ ವಂದೇ ಭಾರತ ಎಕ್ಸಪ್ರೆಸ್ರೈಲಿಗೆ ಚಾಲನೆ ನೀಡಿದ್ದರು.