ನಿಪ್ಪಾಣಿ : : ಇಂದು ತಾವು ಮಾಡುವ ಸಂಕಲ್ಪ ಮೇ ಮೊದಲ ವಾರದಲ್ಲಿ ಸಿದ್ಧಿಯಾಗಬೇಕಾದರೇ ಶಶಿಕಲಾ ಜೊಲ್ಲೆ ಅವರನ್ನು ಮತ್ತೆ ಗೆಲ್ಲಿಸಿ, ಮತ್ತೊಮ್ಮೆ ಸಚಿವರಾಗಲು ಸಂಕಲ್ಪ ಮಾಡುವಂತೆ ವಿಧಾನ ಪರಿಷತ್ ಸದಸ್ಯ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕರೆ ನೀಡಿದರು. ನಿಪ್ಪಾಣಿ ನಗರದಲ್ಲಿ ಹಮ್ಮಿಕೊಂಡ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಶಶಿಕಲಾ ಜೊಲ್ಲೆ ಅವರೇ ನಿಪ್ಪಾಣಿಯ ಬಿಜೆಪಿ ಅಭ್ಯರ್ಥಿ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಾರಿ ಗೆಲುವು ಸಾಧಿಸುವ ಮೂಲಕ ಶಶಿಕಲಾ ಜೊಲ್ಲೆ ಅವರು ಮೂರನೇ ಬಾರಿ ಎಂಎಲ್ ಎ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ಶಶಿಕಲಾ ಜೊಲ್ಲೆ ಮತ್ತೆ ಶಾಸಕಿ : ಮಾಜಿ ಡಿಸಿಎಂ ಲಕ್ಷ್ಮಣ ಸವದಿ









