ಬೆಳಗಾವಿ ಜಿಲ್ಲೆಯ ಗೋಕಾಕ, ಅರಭಾವಿ ಮತ್ತು ಅಥಣಿ ವಿಧಾನಸಭಾ ಮತಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಗೆ ಬರಲಿದ್ದಾರೆ.
ಒಂದು ಕಡೆ ಮಹೇಶ್ ಕುಮಠಳ್ಳಿ ಮತ್ತೊಂದು ಕಡೆ ಲಕ್ಷ್ಮಣ ಸವದಿ ಇಬ್ಬರ ನಡುವೆ ಟಿಕೆಟ್ ಫೈಟ್ ನಡೆಯುತ್ತಿದೆ.ಇವರಿಬ್ಬರ ನಡುವೆ ಇದೀಗ ರಮೇಶ್ ಜಾರಕಿಹೊಳಿ ಎಂಟ್ರಿಯಾಗಿದ್ದಾರೆ. ರಮೇಶ್ ಜಾರಕಿಹೊಳಿ ಎಂಟ್ರಿಯಿಂದ ಮೂಲ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ಉಂಟಾಗಿದೆ.
ಇಂದು ಮಧ್ಯಾಹ್ನ ಬೆಳಗಾವಿಯಿಂದ ಗೋಕಾಕ ಅರಭಾವಿ ಹಾಗು ಅಥಣಿ ಹೋಗಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತದನಂತರ
ಕಾರ್ಯಕರ್ತರೊಂದಿಗೆ ಚುನಾವಣಾ ಸಿದ್ದತೆ ಮತ್ತು ತಯಾರಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇದೆ ವೇಳೆ ಬಿಜೆಪಿಯ ಹಿರಿಯ ಮುಖಂಡರು ಮತ್ತು ಕ್ಷೇತ್ರದ ಶಾಸಕರು ಕೂಡಾ ಭಾಗವಹಿಸಿಲಿದ್ದಾರೆ. ಆದರೆ ಅಥಣಿ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಲಕ್ಷ್ಮಣ ಸವದಿ ಮತ್ತು ಹಾಲಿ ಶಾಸಕ ಮಹೇಶ ಕುಮಟಳ್ಳಿ ಅವರ ನಡುವೆ ಮುಸುಕಿನ ಗುದ್ದಾಟಕ್ಕೆ ಶುರುವಾಗಿದೆ ಇದರಿಂದ ಮಾಜಿ ಡಿಸಿಎಮ್ ಲಕ್ಷ್ಮಣ್ ಸವದಿ ಕಾರ್ಯಕ್ರಮಗಳಿಗೆ ಬರ್ತಾರ ಅಥವಾ ಅಂತರವನ್ನು ಕಾಯ್ದುಕೊಳ್ಳತ್ತಾರಾ ಎಂಬ ರಾಜಕೀಯ ಮಾತುಗಳು ಸ್ವಪಕ್ಷದಲ್ಲಿಯೇ ಕೇಳಿಬರುತ್ತಿದ್ದು, ಈ ಕಗ್ಗಂಟುನ್ನ ಬೊಮ್ಮಾಯಿ ಹೇಗೆ ಬಗೆ ಹರಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.