ಬೆಳಗಾವಿಬೆಳಗಾವಿ ನಗರ

ಸವದಿಗೆ ಸೈಲೆಂಟ್ ಆಗಲು ಹೈಕಮಾಂಡ್ ಖಡಕ್ ವಾರ್ನಿಂಗ್ 

ಬೆಳಗಾವಿ: ರಾಜ್ಯ ಸಾರ್ವತ್ರಿಕ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಈಗಾಗಲೇ ಮೊದಲ ಪಟ್ಟಿಯನ್ನು ಪ್ರಕಟಸಿಸಿದೆ. ಸದ್ಯ ಬಿಜೆಪಿಯಲ್ಲೂ ಸಹ ಟಿಕೆಟ್‌ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಅಥಣಿ ಟಿಕೆಟ್‌ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಧ್ಯೆ  ಫೈಟ್ ನಡೆಯುತ್ತಿದೆ.‌ ಇಷ್ಟು ‌ದಿನ ಸೈಲೆಂಟ್ ಆಗಿದ್ದ ಸವದಿ ಸಮಾವೇಶವನ್ನು ಮಾಡಿ ಜನಾಭಿಪ್ರಾಯ ಪಡೆದು ನಾನು ಟಿಕೆಟ್ ಕೇಳಬೇಕೋ ಬೇಡವೋ ಎಂಬ ನಿರ್ಧಾರ ಮಾಡುತ್ತೇನೆ ಎಂದಿದ್ದರು. ಅದಕ್ಕೆ  ಆದ್ರೆ, ಇದಕ್ಕೆ ರಮೇಶ್​ ಜಾರಕಿಹೊಳಿ  ಬ್ರೇಕ್​ ಹಾಕಿಸಿದ್ದಾರೆ.  ಹೈಕಮಾಂಡ್ ಫೋನ್​ ಕಾಲ್​ ಮೂಲಕ ಲಕ್ಷ್ಮಣ ಸವದಿಗೆ  ಖಡಕ್ ಎಚ್ಚರಿಕೆ  ನೀಡಿದೆ ಎಂದು ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
 ಈ ಬಾರಿ ಚುನಾವಣೆಯಲ್ಲಿ ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್​ ಮಹೇಶ್ ಕುಮಟಳ್ಳಿಗೆ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇತ್ತ ಲಕ್ಷ್ಮಣ ಸವದಿ ಸಹ ಅಥಣಿ ಟಿಕೆಟ್​​ಗೆ ಕಸರತ್ತು ನಡೆಸಿದ್ದಾರೆ. ವಿವಿಧ ಸಮುದಾಯಗಳ ಸಭೆ ಮಾಡುವ ಮೂಲಕ ರಮೇಶ್ ಜಾರಕಿಹೊಳಿಗೆ ಠಕ್ಕರ್​ ಕೊಡಲು ಮುಂದಾಗಿದ್ದ ಸವದಿಗೆ ಹೈಕಮಾಂಡ್​ ಬ್ರೇಕ್​ ಹಾಕಿದೆ. ಬಿಜೆಪಿ ಹೈಕಮಾಂಡ್, ಲಕ್ಷ್ಮಣ ಸವದಿಗೆ ದೂರವಾಣಿ ಕರೆ ಮಾಡಿ ಯಾವುದೇ ಸಮುದಾಯದ ಸಭೆ ಮಾಡದಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಹೈಕಮಾಂಡ್​ ಮೂಲಕ ಸವದಿಗೆ ಲಗಾಮು ಹಾಕಿದ್ರಾ ಎನ್ನುವ ಚರ್ಚೆಗಳು ಶುರುವಾಗಿವೆ.
ಅಥಣಿ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಂಬಂಧ ವಿವಿಧ ಸಮುದಾಯಗಳ ಲಕ್ಷ್ಮಣ ಸವದಿ ಸಭೆ ಮಾಡಿ ತೀರ್ಮಾನಿಸುವುದಾಗಿ ಹೇಳಿದ್ದರು. ಸವದಿ ಆ್ಯಕ್ಟೀವ್ ಆಗ್ತಿದ್ದಂತೆ ಅಲರ್ಟ್ ಆದ ರಮೇಶ್ ಜಾರಕಿಹೊಳಿ ಈ ಬಗ್ಗೆ ಹೈಕಮಾಂಡ್​ಗೆ ದೂರು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಕೆಲ ದಿನಗಳ ಹಿಂದಷ್ಟೇ ಅಮಿತ್ ಶಾ ಗೆ ಭೇಟಿಯಾಗಿ ಈ ವಿಚಾರ ಗಮನಕ್ಕೆ ತಂದಿದ್ದರು. ಇದೀಗ ಹೈಕಮಾಂಡ್​ ಕರೆ ಮಾಡಿ ಯಾವುದೇ ಸಭೆ ಸಮಾರಂಭ ಮಾಡದಂತೆ ಎಚ್ಚರಿಕೆ ನೀಡಿದೆ. ಬೆಳಗಾವಿ ರಾಜಕಾರಣದಲ್ಲಿ ಮಾತ್ರವಲ್ಲ. ರಾಜ್ಯ ರಾಜಕಾರಣದ ಮೇಲೂ ಪ್ರಭಾವ ಬೀರುವಷ್ಟು ರಮೇಶ್ ಜಾರಕಿಹೊಳಿ ಸಮರ್ಥರಿದ್ದಾರೆ. ಮೈತ್ರಿ ಸರ್ಕಾರ ಮುರಿದು ಬಿಜೆಪಿ ಅಧಿಕಾರಕ್ಕೆ ಬರಲು ರಮೇಶ್ ಜಾರಕಿಹೊಳಿ ಪಾತ್ರ ಸಹ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಮಮಾಂಡ್​ ರಮೇಶ್​ ಜಾರಕಿಹೊಳಿ ಮಾತಿಗೆ ಮನ್ನಣೆ ನೀಡಿದೆ ಎನ್ನಲಾಗುತ್ತಿದೆ. ಹೈಕಮಾಂಡ್ ಅವಕಾಶ ಕೊಟ್ರೇ ಸ್ಪರ್ಧೆ ಮಾಡುತ್ತೇನೆ ಅಂತಿದ್ದ ಲಕ್ಷ್ಮಣ ಸವದಿಯನ್ನ ರಮೇಶ್ ಜಾರಕಿಹೊಳಿ ಸೈಲೆಂಟ್ ಮಾಡಿಸಿದ್ದಾರೆ..
TV24 News Desk
the authorTV24 News Desk

Leave a Reply