ಬೆಳಗಾವಿ :ನಗರದ ಧರ್ಮನಾಥ ಭವನದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಯಾರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಬೇಕು ಎನ್ನುವ ವಿಚಾರದಲ್ಲಿ ಬಿಜೆಪಿ ಆಂತರಿಕ ಮತದಾನ ನಡೆಸುತ್ತಿದ್ದು, ಇಂದು ಬೆಳಿಗ್ಗೆ ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಧರ್ಮನಾಥ ಭವನದಲ್ಲಿ ಮತದಾನ ಹಾಗೂ ಅಭ್ಯರ್ಥಿಗಳ ಬಗ್ಗೆ ವಿಚಾರ ವೀಮರ್ಶೆ ನಡೆಸಿದ್ದಾರೆ.
ಬೆಂಗಳೂರು :ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಯಾರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಬೇಕು ಎನ್ನುವ ವಿಚಾರದಲ್ಲಿ ಬಿಜೆಪಿ ಆಂತರಿಕ ಮತದಾನ ನಡೆಸುತ್ತಿದೆ. ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆಗಾಗಿ ಮತದಾನ ನಡೆಯುತ್ತಿದೆ. ಬೆಳಗಾವಿ ಸೇರಿದಂತೆ ರಾಜ್ಯದೆಲ್ಲೆಡೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಇಂದು ಮುಂಜಾನೆ 9ಗಂಟೆಯಿಂದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು . ಸಂಜೆ 5 ರ ವರೆಗೂ ಮತದಾನ-ಅಭಿಪ್ರಾಯ ಸಂಗ್ರಹ ನಡೆಯಲಿದೆ. ಆಯಾ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ರಾಷ್ಟ್ರೀಯ ಪದಾಧಿಕಾರಿಗಳು ಇದರಲ್ಲಿ ಮತದಾನ ಮಾಡಲಿದ್ದಾರೆ. ಬೆಂಗಳೂರಿನ ಮೂರು ಕಡೆಗಳಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ. ಪ್ಯಾಲೇಸ್ ಗ್ರೌಂಡ್ನಲ್ಲಿ 9 ಕ್ಷೇತ್ರ, ಸೌತ್ ಆಂಡ್ ಸರ್ಕಲ್ನಲ್ಲಿ 10 ಕ್ಷೇತ್ರ ಹಾಗೂ ಬ್ಯಾಟರಾಯನಪುರದಲ್ಲಿ 9 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.ಬೆಳಗಾವಿ ನಗರದ ಧರ್ಮನಾಥ ಭವನದಲ್ಲಿ ಮತದಾನ ನಡೆಯುತ್ತಿದೆ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಮತದಾನ ನಡೆಸುತ್ತಿದೆ. ರಾಜ್ಯದಾದ್ಯಂತ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಧಾದಿಕಾರಿಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.
ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನಡೆಯಲಿದೆ ಅಭಿಪ್ರಾಯ ಸಂಗ್ರಹ ಕಾರ್ಯ ನಡೆಯಲಿದೆ. ಅತಿ ಹೆಚ್ಚು ಕ್ಷೇತ್ರ ಹೊಂದಿರುವ ಬೆಂಗಳೂರಿನಲ್ಲಿ 3 ಕಡೆ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಬೆಳಗಾವಿಯಲ್ಲಿ 2 ಕೇಂದ್ರ, ಇತರೆ ಜಿಲ್ಲೆಯಲ್ಲಿ 1 ಕೇಂದ್ರ ಸ್ಥಾಪನೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಅಭಿಪ್ರಾಯ ಸಂಗ್ರಹ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.
ಪ್ರತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಜವಾಬ್ದಾರಿ ಹೊತ್ತಿರುವ 100 – 120 ಪದಾಧಿಕಾರಿಗಳು ಅಭ್ಯರ್ಥಿ ಆಯ್ಕೆ ಸಂಬಂಧ ಮತದಾನ ನಡೆಯಲಿದೆ. ಒಟ್ಟು ಇಡಿ ರಾಜ್ಯದಿಂದ 20 ಸಾವಿರ ಪದಾಧಿಕಾರಿಗಳು ಇಂದಿನ ಮತದಾನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.